ಬಿಗ್ ಬ್ರೇಕಿಂಗ್:ಉಗ್ರರ ಬಳಿಕ ಪಾಕ್ ಸೇನೆ ಮೇಲೂ ಸರ್ಜಿಕಲ್ ಸ್ಟ್ರೈಕ್

ಬಿಗ್ ಬ್ರೇಕಿಂಗ್:ಉಗ್ರರ ಬಳಿಕ ಪಾಕ್ ಸೇನೆ ಮೇಲೂ ಸರ್ಜಿಕಲ್ ಸ್ಟ್ರೈಕ್

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನಕ್ಕೆ ತಕ್ಕ ಉತ್ತರವನ್ನು ನೀಡಿದೆ. ತನ್ನ ಕುತಂತ್ರ ನೀತಿಗಳಿಂದ ಉಗ್ರರನ್ನು ಬೆಂಬಲಿಸಿ ಪೋಷಿಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ವಾಯುಪಡೆಯು ಸರಿಯಾದ ಉತ್ತರವನ್ನು ನೀಡುವ ಮೂಲಕ ಇನ್ನೊಮ್ಮೆ ಕೆಮ್ಮಿದರೆ ಹೆಡೆಮುರಿ ಕಟ್ಟುವುದು ಖಚಿತ ಎಂಬ ಸಂದೇಶವನ್ನು ರವಾನಿಸಿದೆ. ಹಲವಾರು ದಶಕಗಳ ನಂತರ ಇದೇ ಮೊಟ್ಟಮೊದಲ ಬಾರಿಗೆ ಪಾಕ್ ಆಕ್ರಮಿತ ಗಡಿಯನ್ನು ದಾಟಿದ ಭಾರತೀಯ ವಾಯುಪಡೆ ಒಂದೇ ಒಂದು ಪ್ರತಿರೋಧದ ದಾಳಿ ಇಲ್ಲದೆ ತನ್ನ ತಾಕತ್ತು ಏನೆಂಬುದನ್ನು ಈಗಾಗಲೇ ಪಾಕಿಸ್ತಾನಕ್ಕೆ ಅರ್ಥವಾಗುವಂತೆ ಉತ್ತರ ನೀಡಿದೆ.

ಆದರೆ ಕುತಂತ್ರಿ ಬುದ್ಧಿಯನ್ನು ಬಿಡದ ಪಾಕಿಸ್ತಾನವು ನೇರವಾಗಿ ಯುದ್ಧಕ್ಕೆ ಮುಂದೆಬಾರದೇ ಮತ್ತೊಮ್ಮೆ ಭಾರತೀಯರನ್ನು ಕೆಣಕುವ ಪ್ರಯತ್ನ ಮಾಡುತ್ತಿದೆ. ಈಗಾಗಲೇ ತಕ್ಕ ಉತ್ತರವನ್ನು ನೀಡಿದರೂ ಸಹ ಈ ಬಾರಿ ಮತ್ತೊಮ್ಮೆ ಪಾಕಿಸ್ತಾನ ಕಾಲುಕೆರೆದುಕೊಂಡು ಜಗಳಕ್ಕೆ ಬರುತ್ತಿದೆ. ಇದು ಇದೇ ರೀತಿ ಮುಂದುವರೆದಲ್ಲಿ ಪಾಕಿಸ್ತಾನದ ಅಂತ್ಯ ಕಾಣುವುದರಲ್ಲಿ ಅನುಮಾನವೇ ಇಲ್ಲ.

ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಪರಿಣಾಮ ಭಾರತೀಯ ಐವರು ಯೋಧರು ಗಾಯಗೊಂಡಿದ್ದರು.ಇದರಿಂದ ಮತ್ತಷ್ಟು ಕೆರಳಿರುವ ಭಾರತೀಯ ಸೇನೆ ಬಾಲಾಕೋಟ್ ನಲ್ಲಿನ ಜೈಷ್ ಎ ಮೊಹಮ್ಮದ್ ಉಗ್ರರ ಕ್ಯಾಂಪ್ ಧ್ವಂಸ ಮಾಡಿದ ಬಳಿಕ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿದ್ದ ಪಾಕ್ ಸೇನೆಯ 5 ಪೋಸ್ಟ್ ಗಳ ಮೇಲೂ ಭಾರತೀಯ ಯೋಧರು ದಾಳಿ ಮಾಡಿ ಧ್ವಂಸ ಮಾಡಿದ್ದಾರೆ.

ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಭಾರತದತ್ತ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಮಂಗಳವಾರ ರಾತ್ರಿ ಪಾಕಿಸ್ತಾನ ಸೇನೆಯ 5 ಪೋಸ್ಟ್ ಗಳನ್ನು ಧ್ವಂಸ ಮಾಡಿದೆ.