ಹಿಂದೂ ಧರ್ಮದ ಬಗ್ಗೆ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಅಭ್ಯರ್ಥಿ- ಪ್ರಕರಣ ದಾಖಲು

ಹಿಂದೂ ಧರ್ಮದ ಬಗ್ಗೆ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಅಭ್ಯರ್ಥಿ- ಪ್ರಕರಣ ದಾಖಲು

ಹಲವಾರು ಬಾರಿ ವಿವಾದಗಳಿಂದ ಹೆಸರನ್ನು ಪಡೆದುಕೊಂಡಿರುವ ಊರ್ಮಿಳಾ ಮಾತೋಂಡ್ಕರ್ ಅವರು ಮತ್ತೊಮ್ಮೆ ಹಿಂದೂ ಧರ್ಮದ ವಿರುದ್ಧ ನಾಲಿಗೆ ಹರಿ ಬಿಟ್ಟಿದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದ ಊರ್ಮಿಳಾ ಮಾತೊಂಡ್ಕರ್ ಅವರು ಮುಂಬಯಿ ಉತ್ತರದಿಂದ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದಾರೆ. ರಾಜಕೀಯಕ್ಕೆ ಬಂದು ಕೆಲವೇ ಕೆಲವು ದಿನಗಳ ಆಗಿಲ್ಲ ಅಷ್ಟರಲ್ಲಿ ವಿವಾದಗಳ ಸರಮಾಲೆಯನ್ನು ಮೈಮೇಲೆ ಎಳೆದು ಕೊಂಡಿದ್ದಾರೆ. ಇನ್ನು ಕೆಲವರು ಕೇವಲ ಜನಪ್ರಿಯತೆಗಾಗಿ ಈ ರೀತಿಯ ಹೇಳಿಕೆ ನೀಡಿ ದೇಶದ ಶಾಂತಿ ಕೆದಕಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇತ್ತೀಚಿಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಊರ್ಮಿಳಾ ಮಾತೊಂಡ್ಕರ್ ಅವರು ಟಿವಿ ಶೋ ಒಂದರಲ್ಲಿ ಭಾಗವಹಿಸಿ ಹಿಂದೂ ಧರ್ಮದ ಭಾವನೆಗೆ ದಕ್ಕೆ ತರುವಂತೆ ಹಿಂದೂ ಧರ್ಮ ಇಡೀ ಜಗತ್ತಿನಲ್ಲಿ ಅತ್ಯಂತ ಹಿಂಸಾತ್ಮಕ ಧರ್ಮ ವಾಗಿ ಮಾರ್ಪಟ್ಟಿದೆ ಎಂದು ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಅವರನ್ನು ದೂಷಿಸುವುದು ಉದ್ದೇಶದಿಂದ ಹಿಂದೂ ಧರ್ಮದ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ಸಮಯದಲ್ಲಿ ಬಿಜೆಪಿ ಪಕ್ಷದ ನಾಯಕ ಸುರೇಶ್ ನಗುವಾಗಿ ಎಂಬುವವರು ಪೋಲಿಸ್ ಸ್ಟೇಷನ್ ನಲ್ಲಿ ದೂರನ್ನು ದಾಖಲಿಸಿದ್ದಾರೆ,ಟಿವಿ ಶೋ ಒಂದರಲ್ಲಿ ಭಾಗವಹಿಸಿದ್ದ ನಟಿ ಹಿಂದೂ ಧರ್ಮಿಯರ ಭಾವನೆಗೆ ಧಕ್ಕೆ ಬರುವಂತಹ ಹೇಳಿಕೆ ನೀಡಿದ್ದಾಳೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.