ಯಡಿಯೂರಪ್ಪ ಇನ್ ಫುಲ್ ಆಕ್ಷನ್ ! ಮತ್ತೊಂದು ಮಹತ್ವದ ಆದೇಶ ಹೊರಡಿಸಲಿದ್ದಾರೆ ಬಿಎಸ್ ವೈ

ಯಡಿಯೂರಪ್ಪ ಇನ್ ಫುಲ್ ಆಕ್ಷನ್ ! ಮತ್ತೊಂದು ಮಹತ್ವದ ಆದೇಶ ಹೊರಡಿಸಲಿದ್ದಾರೆ ಬಿಎಸ್ ವೈ

ಕರ್ನಾಟಕದ ಮುಖ್ಯಮಂತ್ರಿಗಳಾಗಿರುವ ಯಡಿಯೂರಪ್ಪನವರು ಅಧಿಕಾರಕ್ಕೆ ಏರಿದ ಕೆಲವೇ ಕೆಲವು ದಿನಗಳಲ್ಲಿ ಹಲವಾರು ಆದೇಶಗಳನ್ನು ಹೊರಡಿಸಿದ್ದಾರೆ. ಇಷ್ಟು ದಿವಸ ರಾಜ್ಯ ಸರ್ಕಾರ ಸತ್ತಿದೆ ಎಂದು ಆರೋಪ ಮಾಡುತ್ತಿದ್ದ ಯಡಿಯೂರಪ್ಪನವರು ತಾವು ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಆಡಳಿತ ಶಕ್ತಿಯನ್ನು ಹೆಚ್ಚು ಮಾಡಬೇಕು ಎಂದು ಪಣ ತೊಟ್ಟಂತೆ ಕಾಣುತ್ತಿದೆ. ಈಗಾಗಲೇ ಹಲವಾರು ಆದೇಶಗಳನ್ನು ಹೊರಡಿಸಿರುವ ಬಿಎಸ್ ಯಡಿಯೂರಪ್ಪನವರು ಇದೀಗ ಮತ್ತೊಂದು ಆದೇಶ ಹೊರಡಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಷ್ಟು ದಿವಸ ರಾಜ್ಯದಲ್ಲಿ ಕಡಿಮೆ ಬೆಲೆಗೆ ಆಹಾರ ನೀಡುತ್ತಿದ್ದ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಬಿಜೆಪಿ ಪಕ್ಷವು ಮೊದಲಿನಿಂದಲೂ ಆಸಕ್ತಿ ವಹಿಸಿದ್ದು ನಿಮಗೆಲ್ಲರಿಗೂ ತಿಳಿದಿರುವ ವಿಷಯ. ಇದೀಗ ಇದೇ ವಿಚಾರವಾಗಿ ಬಿಎಸ್ ಯಡಿಯೂರಪ್ಪನವರು ಆದೇಶ ಹೊರಡಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೊದಲಿನಿಂದಲೂ ಸರ್ಕಾರದ ಹಣದಲ್ಲಿ ಸಾಮಾನ್ಯ ಜನರಿಗೆ ಕಡಿಮೆ ಬೆಲೆಯಲ್ಲಿ ಆಹಾರ ವಿತರಣೆ ಮಾಡುತ್ತಿದ್ದ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಹಲವಾರು ಅಭಿಪ್ರಾಯಗಳು ಕೇಳಿ ಬಂದಿದ್ದವು. ದುಡ್ಡು ನೀಡುತ್ತಿರುವುದು ಸರ್ಕಾರ, ಕ್ಯಾಂಟೀನ್ ಗೆ ಇಂದಿರಾ ಹೆಸರು ಯಾಕೆ ಇಂದು ಹಲವಾರು ಜನ ಪ್ರಶ್ನೆ ಮಾಡುತ್ತಿದ್ದರು. ಇದೀಗ ಇದೇ ವಿಚಾರವನ್ನು ಮುಂದಿಟ್ಟುಕೊಂಡಿರುವ ಬಿಎಸ್ ಯಡಿಯೂರಪ್ಪನವರು ಇಂದಿರಾ ಕ್ಯಾಂಟೀನ್ ಹೆಸರನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅಥವಾ ಇನ್ಯಾರಾದರೂ ದೇಶಕ್ಕಾಗಿ ಹೋರಾಡಿದ ವೀರ ವನಿತೆಯರು ಅಥವಾ ಅನ್ನಪೂರ್ಣ ಕ್ಯಾಂಟೀನ್ ಎಂದು ಹೆಸರಿಡಲು ಚಿಂತನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಬಿಜೆಪಿ ಪಕ್ಷದ ನಾಯಕರೊಬ್ಬರು ಹೊರಹಾಕಿದ್ದಾರೆ. ಸರ್ಕಾರದಿಂದ ಲಿಖಿತ ಆದೇಶ ಬಂದ ತಕ್ಷಣ ಇಡೀ ರಾಜ್ಯದಲ್ಲಿ ಹೆಸರು ಬದಲಾಯಿಸಲಾಗುವುದು ಹಾಗೂ ಈ ಕುರಿತು ಎಲ್ಲಾ ಮಹಾನಗರ ಪಾಲಿಕೆಗಳಿಗೆ ಈಗಾಗಲೇ ಸುದ್ದಿಯನ್ನು ತಲುಪಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.