ಡಿಕೆಶಿ ಬೆಂಗಳೂರಿಗೆ ಬಂದ ಬೆನ್ನಲ್ಲೇ ಟಾಂಗ್ ನೀಡಿದ ಸಿದ್ದು ! ಹೇಳಿದ್ದೇನು ಗೊತ್ತಾ??

ಡಿಕೆಶಿ ಬೆಂಗಳೂರಿಗೆ ಬಂದ ಬೆನ್ನಲ್ಲೇ ಟಾಂಗ್ ನೀಡಿದ ಸಿದ್ದು ! ಹೇಳಿದ್ದೇನು ಗೊತ್ತಾ??

ಸಿದ್ದರಾಮಯ್ಯ  ಹಾಗೂ ಡಿ.ಕೆ ಶಿವಕುಮಾರ್ ಅವರ ನಡುವೆ ಮೊದಲಿನಿಂದಲೂ ಮನಸ್ತಾಪಗಳು ಇವೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಎಲ್ಲಿಯೂ ಬಹಿರಂಗವಾಗಿ ಇಬ್ಬರೂ ನಾಯಕರು ಅಸಮಾಧಾನ ವನ್ನು ಹೊರ ಹಾಕಿಲ್ಲ, ಹಾಗಂತ ಇಬ್ಬರೂ ನಾಯಕರು ತಾವು ಜೊತೆಗಿದ್ದೇವೆ ಎಂಬಂತೆ  ಎಲ್ಲಿಯೂ ಬಹಿರಂಗವಾಗಿ ನಡೆದು ಕೊಂಡಿಲ್ಲ. ಇಬ್ಬರು ನಾಯಕರ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಆದ ಪ್ರಭಾವವನ್ನು ಮೂಡಿಸಲು ಇನ್ನಿಲ್ಲದ ಪ್ರಯತ್ನಗಳು ನಡೆಯುತ್ತಿವೆ. ಇದೇ ಕಾರಣಕ್ಕಾಗಿ ಇಬ್ಬರ ನಡುವೆ ಶೀತಲ ಸಮರ ನಡೆಯುತ್ತಿವೆ ಎಂಬ ಮಾತುಗಳು ಬಲವಾಗಿ ಹಲವಾರು ತಿಂಗಳುಗಳಿಂದ ಕೇಳಿಬರುತ್ತಿವೆ. ಈ ಹೇಳಿಕೆಗಳಿಗೆ ಇದೀಗ ಮತ್ತಷ್ಟು ಪೂರಕ ಎಂಬಂತೆ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿಗೆ ಬಂದ ಬೆನ್ನಲ್ಲಿ ಸಿದ್ದರಾಮಯ್ಯ ರವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಈಗಾಗಲೇ ಡಿ.ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡುತ್ತಿದ್ದಾರೆ.

ಈ ಸ್ವಾಗತ ಕಾರ್ಯಕ್ರಮದಲ್ಲಿ ಕಾರಣಾಂತರಗಳಿಂದ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಉತ್ತರ ಕರ್ನಾಟಕದಲ್ಲಿ ಉಪ ಚುನಾವಣೆಗೆ ತಯಾರಿ ನಡೆಸಲು ತೆರಳಿರುವ ಸಿದ್ದರಾಮಯ್ಯ ರವರು, ಡಿ.ಕೆ ಶಿವಕುಮಾರ್ ಅವರಿಗೆ ಮಾತಿನ ಮೂಲಕ ಟಾಂಗ್ ನೀಡಿದ್ದಾರೆ. ಮೊದಲು ಡಿ.ಕೆ ಶಿವಕುಮಾರ್ ಅವರಿಗೆ ನಡೆಯುತ್ತಿರುವ ಸ್ವಾಗತ ಸಮ್ಮೇಳನದಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಪಾತ್ರವಿಲ್ಲ, ಅದು ಕೇವಲ ಅವರ ಅಭಿಮಾನಿಗಳು ಮಾತ್ರ ಅವರು ಯಾರು ಕಾಂಗ್ರೆಸ್ ಪಕ್ಷದ ವರಲ್ಲ, ಇನ್ನೂ ಡಿ.ಕೆ ಶಿವಕುಮಾರ್ ರವರು ದೆಹಲಿಯಲ್ಲಿ ಲಾಬಿ ನಡೆಸಿ ಬಂದಿದ್ದಾರೆ ಎನ್ನಲಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಸದ್ಯಕ್ಕಿಲ್ಲ. ದಿನೇಶ್ ಗುಂಡೂರಾವ್ ರವರು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಹೈಕಮಾಂಡ್ ನಿಂದ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಖಚಿತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಡಿ.ಕೆ ಶಿವಕುಮಾರ್ ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.