NRC ವಿರುದ್ಧ ಮಾತನಾಡಿದ ಕಾಂಗ್ರೆಸ್ ಗೆ ಟಾಂಗ್ ನೀಡಿದ ಸುರೇಶ್ ಕುಮಾರ್ ! ಪ್ರಶ್ನೆ ಮಾಡಿದ್ದು ಹೇಗೆ ಗೊತ್ತಾ?

NRC ವಿರುದ್ಧ ಮಾತನಾಡಿದ ಕಾಂಗ್ರೆಸ್ ಗೆ ಟಾಂಗ್ ನೀಡಿದ ಸುರೇಶ್ ಕುಮಾರ್ ! ಪ್ರಶ್ನೆ ಮಾಡಿದ್ದು ಹೇಗೆ ಗೊತ್ತಾ?

ನಮಸ್ಕಾರ ಸ್ನೇಹಿತರೇ, ಕಾಂಗ್ರೆಸ್ ಪಕ್ಷವು ಪೌರತ್ವ ತಿದ್ದುಪಡಿ ಮಸೂದೆ ಹಾಗೂ ಅಕ್ರಮ ವಲಸಿಗರನ್ನು ಹೊರಹಾಕುವ NRC ವಿರುದ್ಧ ಹೋರಾಟಕ್ಕೆ ಕರೆ ನೀಡಿ ಈಗಾಗಲೇ ಹಲವಾರು ಬಾರಿ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ.. ಆದರೆ ಬಿಜೆಪಿ ಪಕ್ಷವು ಯಾರೇ ವಿರೋಧ ಮಾಡಿದರೂ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಮಸೂದೆ ಹಾಗೂ NRC ಜಾರಿ ಮಾಡಿಯೇ ಸಿದ್ದ, ವಾಪಸ್ಸು ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಖಡಾ ಖಂಡಿತವಾಗಿ ಕಡ್ಡಿ ಮುರಿದಂತೆ ಈಗಾಗಲೇ ಹೇಳಿಕೆ ನೀಡಿದ್ದಾಗಿದೆ. ಹೀಗಿರುವಾಗ ಕರ್ನಾಟಕದ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ರವರು NRC ಮಸೂದೆ ಯನ್ನು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ.

ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಸುರೇಶ್ ಕುಮಾರ್ ರವರು, ತಮ್ಮದೇ ಆದ ವ್ಯಂಗ್ಯದ ಮಾತುಗಳ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷವು ನಿಮಗೆಲ್ಲರಿಗೂ ತಿಳಿದಿರುವ ಹಾಗೇ ಮೊದಲಿನಿಂದಲೂ ಬ್ರಿಟಿಷರನ್ನು ಭಾರತದಿಂದ ಹೊರದಬ್ಬಲು ಹೋರಾಟ ಮಾಡಿದ್ದು ಕಾಂಗ್ರೆಸ್ ಪಕ್ಷ, ಆರ್ ಎಸ್ ಎಸ್ ಸಂಘ ಸಂಸ್ಥೆ ಹಾಗೂ ಬಿಜೆಪಿ ಪಕ್ಷಗಳು ಏನನ್ನೂ ಮಾಡಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತದೆ. ಇದೇ ಮಾತನ್ನು ಬಳಸಿಕೊಂಡಿರುವ ಸುರೇಶ್ ಕುಮಾರ್ ರವರು, ಬ್ರಿಟೀಷರನ್ನು ಭಾರತ ಬಿಟ್ಟು ತೊಲಗಿಸಿದ್ದು ನಾನೇ ಎಂದು ಬಡಾಯಿ ಕೊಚ್ಚುವ ಪಕ್ಷ, ಅಕ್ರಮ ನುಸುಳುಕೋರರನ್ನು ಭಾರತದಿಂದ ತೊಲಗಿಸಲು ವಿರೋಧ ಮಾಡುತ್ತಿರುವುದು ಏಕೆ? ಎಂದು ಪ್ರಶ್ನೆ ಮಾಡಿದ್ದಾರೆ. ಇವರ ಪ್ರಶ್ನೆಗೆ ಬಾರಿ ಬೆಂಬಲಿತ ಕಾಮೆಂಟ್ ಗಳು ವ್ಯಕ್ತವಾಗಿದ್ದು, ಕಾಂಗ್ರೆಸ್ಸಿಗರೇ ಉತ್ತರಿಸಿ ಎಂದು ಜನರು ಅಭಿಪ್ರಾಯ ಪಟ್ಟಿದ್ದಾರೆ.