ಲೋಕಾಯುಕ್ತ ಕಚೇರಿಯಲ್ಲಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕು ಇರಿತ..!!ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದೆಯೇ ..??

ಲೋಕಾಯುಕ್ತ ಕಚೇರಿಯಲ್ಲಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕು ಇರಿತ..!!ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದೆಯೇ ..??

0

ಇಂದು ವ್ಯಕ್ತಿಯೊಬ್ಬ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಈ ಘಟನೆ ನಡೆದಿದೆ. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ತೇಜಸ್ ಶರ್ಮಾ ಎಂಬ ವ್ಯಕ್ತಿ ಏಕಾಏಕಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿ ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನ ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ.

ಹಲ್ಲೆಗೊಳಗಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಶ್ವನಾಥ್ ಶೆಟ್ಟಿ ಅವರನ್ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಷ್ಟಕು ನಡೆದಿದ್ದೇನು ಗೊತ್ತಾ?

ಇಂದು ಮಧ್ಯಾಹ್ನ 12.45ರ ಸುಮಾರಿಗೆ ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಲೋಕಾಯುಕ್ತರನ್ನ ಭೇಟಿಯಾಗಲು ಆರೋಪಿ ತೇಜ ರಾಜ್ ಶರ್ಮಾ ಬಂದಿದ್ದ. ರಿಜಿಸ್ಟರ್ ಪುಸ್ತಕದಲ್ಲಿ ತನ್ನ ಹೆಸರು, ವಾಹನ ನೋಂದಣಿ ಸಂಖ್ಯೆ ಎಲ್ಲವನ್ನೂ ಬರೆದು ಕಚೇರಿ ಒಳಗೆ ಹೋದ ಶರ್ಮಾ, ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಆರೋಪಿಯನ್ನ ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ.

ವಿಶ್ವನಾಥ್ ಶೆಟ್ಟಿ ಅವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ ನೋಡಿದ ಮೇಲೆ ಪ್ರತಿಯೊಬ್ಬರಿಗೂ ಒಂದು ಪ್ರಶ್ನೆ ಕಾಡದೆ ಇರದು ಅದೆ ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದೆಯೇ?? ಎಂದು.