ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! ಈ ಕ್ಷೇತ್ರ ಕೂಡ ಚುನಾವಣೆಗೆ ಮುಂಚೆಯೇ ಬಿ ಜೆ ಪಿ ವಶವಾಗುತ್ತ??

ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! ಈ ಕ್ಷೇತ್ರ ಕೂಡ ಚುನಾವಣೆಗೆ ಮುಂಚೆಯೇ ಬಿ ಜೆ ಪಿ ವಶವಾಗುತ್ತ??

0

ಹೌದು ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! ಈ ಕ್ಷೇತ್ರ ಕೂಡ ಚುನಾವಣೆಗೆ ಮುಂಚೆಯೇ ಬಿ ಜೆ ಪಿ ವಶವಾಗುತ್ತೆ ಅನುಮಾನ ಹುಟ್ಟಿಕೊಂಡಿದೆ.

ಅಶೋಕ್ ಖೇಣಿ ರವರಿಗೆ ಬೀದರ್ ಕ್ಷೇತ್ರದಿಂದ ಟಿಕೆಟ್ ನೀಡಿರುವುದು ತಮಗೆಲ್ಲರಿಗೂ ಗೊತ್ತಿರುವ ವಿಷಯ.ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ ನಲ್ಲಿ ಬಂಡಾಯ ಬುಗಿಲೆದ್ದಿದು ನಿಮಗೆ ತಿಳಿದಿರುವುದೇ. ಆದರೆ ಈ ಕ್ಷೇತ್ರದಲ್ಲಿ ಅಶೋಕ್ ಖೇಣಿ ರವರು ಸ್ಪರ್ಧಿಸುವುದೇ ಅನುಮಾನವಾಗಿದೆ.

ಅಷ್ಟಕ್ಕೂ ಯಾಕೆ ಗೊತ್ತಾ?

ಅಶೋಕ್ ಖೇಣಿ ಭಾರತದ ಪ್ರಜೆ ಅಲ್ಲ. ಅವರು ಅಮೆರಿಕದ ಪ್ರಜೆಯಾಗಿದ್ದು, ಸರ್ಕಾರದ ಹಲವು ಯೋಜನೆಗಳಲ್ಲಿ ಗುತ್ತಿಗೆ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.

ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ನಾಮಪತ್ರ ಅಂಗೀಕಾರ ಮಾಡದಂತೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ದೂರು ನೀಡಿದಕ್ಕೆ ಚುನಾವಣಾ ಆಯೋಗ ಏನು ಮಾಡಿತು ಗೊತ್ತಾ?

ದೂರು ದಾಖಲಾದ ಹಿನ್ನೆಲೆಯಲ್ಲಿ ಖೇಣಿ ನಾಮಪತ್ರ ಅಂಗೀಕಾರಕ್ಕೆ ಆಯೋಗದ ಅಧಿಕಾರಿಗಳು ತಡೆ ನೀಡಿದ್ದಾರೆ. ದೂರಿನ ಸಂಬಂಧ ಚುನಾವಣಾ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

2013ರಲ್ಲಿ ಅಶೋಕ್ ಖೇಣಿ ಕರ್ನಾಟಕ ಮಕ್ಕಳ ಪಕ್ಷದ ಅಡಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದಿಂದ ಕಣಕ್ಕೆ ಇಳಿದು ಗೆದ್ದಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳಿಗೆ ವೋಟ್ ಹಾಕಿದ್ದ ಖೇಣಿ ಮಾರ್ಚ್ ತಿಂಗಳಿನಲ್ಲಿ ಕಾಂಗ್ರೆಸ್ ಸೇರಿದ್ದರು. ಪ್ರಸ್ತುತ ಖೇಣಿ ಅವರಿಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿದೆ.

ಸಿದ್ದರಾಮಯ್ಯರವರ ಬೆಂಬಲಿಗರಿಂದ ಪಬ್ಲಿಕ್ ಟಿವಿ ಕಛೇರಿಯಲ್ಲಿ ದಾಂಧಲೆ ಒಮ್ಮೆ ಓದಿ