ಕಾಂಗ್ರೆಸ್ ರವರ ಹೇಳಿಕೆ ಗಳಿಗೆ ತಿರುಗೇಟು ನೀಡಿದ ಅಮಿತ್ ಶಾ

ಕಾಂಗ್ರೆಸ್ ರವರ ಹೇಳಿಕೆ ಗಳಿಗೆ ತಿರುಗೇಟು ನೀಡಿದ ಅಮಿತ್ ಶಾ

0

ಅಷ್ಟಕ್ಕೂ ಏನು ನಡೆದಿತ್ತು?

ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾಜ್ಯಪಾಲರು ಸರ್ಕಾರ ರಚನೆಗೆ ಜೆಡಿಎಸ್, ಕಾಂಗ್ರೆಸ್ ಗೆ ಅವಕಾಶ ನೀಡಬೇಕಿತ್ತು. ಆದರೆ ನೀಡಲಿಲ್ಲ ಎಂದು ಎಂದು ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಶಾಸಕರು ‘ ರಾಜ್ಯಪಾಲರು ರಾಜ್ಯಪಾಲರು ಸರ್ಕಾರ ರಚನೆಗೆ ಜೆಡಿಎಸ್, ಕಾಂಗ್ರೆಸ್ ಗೆ ಅವಕಾಶ ನೀಡಲಿಲ್ಲ. ಹಾಗಾದರೆ ಗೋವಾದಲ್ಲಿ ಕಾಂಗ್ರೆಸ್ ರಚನೆಗೆ ಸರ್ಕಾರ ಅವಕಾಶ ನೀಡಬೇಕಿತ್ತು, ಆದರೆ ಕಾಂಗ್ರೆಸ್ ಗೆ ಕೊಡದೇ ಬಿಜೆಪಿಗೆ ಕೊಟ್ಟಿದ್ದಾರೆ. ಇಲ್ಲಿಯೂ ಕೂಡ ಹಾಗೆ ಮಾಡಿದ್ದಾರೆ ಎಂದು ಎಲ್ಲೆಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರ ರಚನೆಗೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಆಹ್ವಾನಿಸುವ ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರ ನಿರ್ಧಾರವು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಮತ್ತು ಸಂವಿಧಾನದ ತುಳಿತವಾಗಿದೆ ಎಂದು ಕಾಂಗ್ರೆಸ್ ಬುಧವಾರ ಬಣ್ಣಿಸಿತ್ತು.

ಅಮಿತ್ ಶಾ ಅವರ ಮಾತುಗಳು ಕೆಳಗಡೆ ಇವೆ !

ಈ ಆರೋಪಕ್ಕೆ ಟ್ವೀಟ್‌ನಲ್ಲಿ ತಿರುಗೇಟು ನೀಡಿರುವ ಶಾ,ಕರ್ನಾಟಕದಲ್ಲಿ ಜನಾದೇಶ ಯಾರಿಗೆ ಲಭಿಸಿದೆ? 104 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೋ ಅಥವಾ ತನ್ನ ಮುಖ್ಯಮಂತ್ರಿ ಮತ್ತು ಸಚಿವರು ಭಾರೀ ಅಂತರದೊಂದಿಗೆ ಸೋಲನ್ನಪ್ಪುವುದರೊಂದಿಗೆ 122 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿರುವ ಕಾಂಗ್ರೆಸ್ ಪಕ್ಷಕ್ಕೋ? ಜೆಡಿಎಸ್ ಕೇವಲ 37 ಸ್ಥಾನಗಳನ್ನು ಗೆದ್ದಿದೆ ಮತ್ತು ಹಲವೆಡೆಗಳಲ್ಲಿ ಅದರ ಅಭ್ಯರ್ಥಿಗಳು ಠೇವಣಿಗಳನ್ನು ಕಳೆದುಕೊಂಡಿದ್ದಾರೆ. ಜನರು ಇದನ್ನೆಲ್ಲ ಅರ್ಥ ಮಾಡಿಕೊಳ್ಳುವಷ್ಟು ಬುದ್ಧಿವಂತರಿದ್ದಾರೆ ಎಂದು ಹೇಳಿದ್ದಾರೆ.

‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂಬ ಕಾಂಗ್ರೆಸ್ ಆರೋಪಕ್ಕೆ ಗುರುವಾರ ತಿರುಗೇಟು ನೀಡಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು,ಹತಾಶ ಕಾಂಗ್ರೆಸ್ ಪಕ್ಷವು ಜುಜುಬಿ ರಾಜಕೀಯ ಲಾಭಕ್ಕಾಗಿ ಕರ್ನಾಟಕದಲ್ಲಿ ಸರಕಾರ ರಚನೆಗಾಗಿ ಜೆಡಿಎಸ್ ಜೊತೆ ಸಮಯಸಾಧಕ ಮೈತ್ರಿ ಮಾಡಿಕೊಂಡಾಗಲೇ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿತ್ತು ಎಂದು ಟೀಕಿಸಿದ್ದಾರೆ.