ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ನ ಮೊದಲ ವಿಕೆಟ್: ನಾಳೆ ರಾಜೀನಾಮೆ
ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ನ ಮೊದಲ ವಿಕೆಟ್: ನಾಳೆ ರಾಜೀನಾಮೆ
ಬಿಜೆಪಿಯ ಮಾತುಕತೆ ವರ್ಕೌಟ್ ಆಗಿದ್ದು, ನಾಳೆ ಕಾಂಗ್ರೆಸ್ ನ ಆನಂದ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ರಾಜನಾಥ ಸಿಂಗ್ ನಿರ್ದೇಶನದಂತೆ ಆನಂದಸಿಂಗ್ ರಾಜೀನಾಮೆ ನೀಡಲಿದ್ದಾರೆ. ನಾಳೆ ನ್ಯಾಯಾಲಯದ ನಿರ್ಣಯದ ಬಳಿಕ ರಾಜ್ಯಪಾಲರಿಗೆ ರಾಜೀನಾಮೆ ನೀಡಲಿದ್ದಾರೆ, ಇಂದು ರಾಜನಾಥ್ ಸಿಂಗ್ ಭೇಟಿಯ ಬಳಿಕ ಆನಂದ್ ಸಿಂಗ್ ಈ ನಿರ್ಧಾರ ಕೈಗೊಂಡಿದ್ದಾರೆ.
ನಾಳೆ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಆನಂದ್ ಸಿಂಗ್ ರಾಜೀನಾಮೆ ಸಲ್ಲಿಸಲಿದ್ದು, ನಂತರ ಬಿಜೆಪಿ ಸೇರ್ಪಡೆ ಸಾದ್ಯತೆ ಇದೆ ಎನ್ನಲಾಗಿದೆ.
ಹೊಸಪೇಟೆ ಕ್ಷೇತ್ರದಿಂದ ಜಯಗಳಿಸಿರುವ ಆನಂದ್ ಸಿಂಗ್ ಫಲಿತಾಂಶ ಬಂದಾಗಿನಿಂದಲೂ ಕಾಣಿಸಿಕೊಂಡಿರಲಿಲ್ಲ.ನಾನು ಯಾವುದೇ ಪಕ್ಷಕ್ಕೂ ಬೆಂಬಲ ಕೊಡಲ್ಲ. ನನ್ನನ್ನು ಈ ಬಾರಿ ಕ್ಷಮಿಸಿಬಿಡಿ. ಎರಡು ದಿನಗಳಿಂದ ಮಾನಸಿಕ ತೊಂದರೆ ಅನುಭವಿಸುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ‘ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.