ಜಗ್ಗತ್ತಿಗೆ ಸ್ಪೂರ್ತಿ ಈ ಹೆಮ್ಮಯ ಭಾರತ, ಕಾರಣಕರ್ತ ಮೋದಿ

ಜಗ್ಗತ್ತಿಗೆ ಸ್ಪೂರ್ತಿ ಈ ಹೆಮ್ಮಯ ಭಾರತ, ಕಾರಣಕರ್ತ ಮೋದಿ

0

ನ್ಯೂಯಾರ್ಕ್: ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾದ ಬಳಿಕ ಜಾಗತಿಕ ಮಟ್ಟದಲ್ಲಿ ಭಾರತ ಪ್ರಕಾಶಿಸುತ್ತಿದ್ದು ಇದಕ್ಕೆ ಸಾಕ್ಷಿಯೆಂಬಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಭಾರತವೇ ಸ್ಫೂರ್ತಿ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೋ ಗುಟೆರೆಸ್ ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿ ನಾಯಕತ್ವದ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಲಭಿಸಿದ್ದು ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಮತ್ತು ನೋಟು ನಿಷೇಧ ಸೇರಿ ಹಲವು ವಿಷಯಗಳಲ್ಲಿ ಭಾರತವನ್ನು ಹಲವು ದೇಶಗಳು ಹಾಗೂ ಸಂಸ್ಥೆಗಳು ಹೊಗಳುತ್ತಿವೆ.

ವಿಶ್ವಸಂಸ್ಥೆ ರಾಯಭಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಗುಟೆರೆಸ್ ಭಾರತದ ನಾಯಕತ್ವ, ಅಭಿವೃದ್ಧಿಗಾಗಿ ವಿಶ್ವಸಂಸ್ಥೆ ಜತೆ ಹೊಂದಿರುವ ಸಹಭಾಗಿತ್ವ ಸೇರಿ ಹಲವು ವಿಷಯಗಳಲ್ಲಿ ಭಾರತ ಹೊಂದಿರುವ ಬದ್ಧತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಪ್ರೇರಣಾದಾಯಕ ಎಂದು ವರ್ಣಿಸಿದ್ದಾರೆ.

ಸ್ಥಿರ ಅಭಿವೃದ್ಧಿ ಗುರಿ ಮುಟ್ಟುವಲ್ಲಿ ಭಾರತ ವಹಿಸಿದ ಪಾತ್ರ ಪ್ರಮುಖವಾದದ್ದು. ಆರಂಭದಲ್ಲಿ ಅಂದುಕೊಂಡ ಮಟ್ಟಕ್ಕೆ ಪ್ರಯತ್ನಗಳು ನಡೆಯುತ್ತಿರಲ್ಲಿಲ್ಲ. ಆದರೆ ಭಾರತ ಅಭಿವೃದ್ಧಿಗಾಗಿ ನಡೆಸುತ್ತಿರುವ ಪ್ರಯತ್ನ, ಶ್ರಮ ಹಾಗೂ ಅದರ ಮುಂದಾಲೋಚನೆಯು ಗುರಿ ಮುಟ್ಟಲು ಸ್ಪೂರ್ತಿಯಾಯಿತು ಎಂದು ಹೇಳಿದ್ದಾರೆ.