ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡ ಶಿಲ್ಪಾ ಗಣೇಶ್

ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡ ಶಿಲ್ಪಾ ಗಣೇಶ್

0

ಈಗ ಎಲ್ಲೆಲ್ಲೂ ಭ್ರಷ್ಟಾಚಾರ ಹೇಳಿಕೆಗಳನ್ನು ನೀಡುತ್ತಿರುವ ರಾಜಕಾರಣಿಗಳಿಗೆ ಎಲ್ಲರೂ ತರಾಟೆಗೆ ತೆಗೆದು ಕೊಳ್ಳುತ್ತಾ ಇದ್ದಾರೆ. ಮೊನ್ನೆಯಷ್ಟೇ ನಾನು ವಿಧಾನಸೌಧದಲ್ಲಿ ನಾನಂತೂ ಭ್ರಷ್ಟಾಚಾರ ನೋಡಿಲ್ಲ ಎಂದು ಕುಮಾರಸ್ವಾಮಿರವರ ಹೇಳಿಕೆಗೆ ಉತ್ತರ ನೀಡಿದ್ದ ಸಿದ್ದರಾಮಯ್ಯನವರಿಗೆ ಈಗ ಶಿಲ್ಪಾ ಗಣೇಶ್ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಧಾನಸೌಧದಲ್ಲಿ ಭ್ರಷ್ಟಾಚಾರ ಇದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದರು. ವಿಧಾನಸೌಧದಲ್ಲಿ ನಾನಂತೂ ಭ್ರಷ್ಟಾಚಾರ ನೋಡಿಲ್ಲ. ಕುಮಾರಸ್ವಾಮಿ ನೋಡಿದ್ದರೆ ಅದನ್ನು ನಿಲ್ಲಿಸಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಟಾಂಗ್ ನೀಡಿರುವ ಬಿಜೆಪಿ ಮುಖಂಡೆ ಶಿಲ್ಪಾ ಗಣೇಶ್ ‘ ಹೇಗೆ, ನೋಡೋಕೆ ಸಾಧ್ಯ ಹೇಳಿ.ವಿಧಾನಸೌಧದಲ್ಲಿ ನೀವು ಎಚ್ಚರ ಇದ್ದಿದ್ದಕ್ಕಿಂತ ನಿದ್ದೆ ಮಾಡಿದ್ದೆ ಜಾಸ್ತಿ, ಅದಕ್ಕೆ ಏನು ಗೊತ್ತಾಗಲಿಲ್ಲ, ಎಂದು ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.