ಹೌದು ಡಿಕೆಶಿಗೆ ಈಗ ಮತ್ತೊಂದು ಶಾಕ್, ಬೇಕಾದ ಖಾತೆಯನ್ನು ದಕ್ಕಿಸಿಕೊಳ್ಳಲಾಗದೇ, ನೊಂದಿದ್ದ ಡಿಕೆ ಶಿವಕುಮಾರ್ ಅವರಿಗೆ ಈಗ ಮತ್ತೊಂದು ಶಾಕ್ ಆಗಿದೆ. ಅಷ್ಟಕ್ಕೂ ವಿಷಯದ ಮೂಲವೇನು ಸಂಪೂರ್ಣ ಮಾಹಿತಿಗಾಗಿ ಕೆಳಗಡೆ ಓದಿ.
ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಸಚಿವ ಡಿ.ಕೆ ಶಿವಕುಮಾರ್ ಅವರು ಆದಾಯ ತೆರಿಗೆ ಇಲಾಖೆಗೆ ಸುಳ್ಳು ಮಾಹಿತಿ ನೀಡಿರುವ ಆರೋಪದಲ್ಲಿ ಆದಾಯ ತೆರಿಗೆ ಕಾಯ್ದೆ ಕಲಂ 277 ಮತ್ತು 278 ಹಾಗೂ ಐಪಿಸಿ ಕಲಂ 193, 199 ಹಾಗೂ 120 ಬಿ ಅಡಿ ಸೋಮವಾರ ಕೇಸು ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ಸಮನ್ಸ್ ಜಾರಿ ಮಾಡಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಇದೇ ವೇಳೆ ಡಿ.ಕೆ ಶಿವಕುಮಾರ್ ಅವರ ಜೊತೆಗೆ ಚಿನ್ ನಾರಾಯಣ, ಉದ್ಯಮಿ ಸುನೀಲ್ ಕುಮಾರ್ ಶರ್ಮಾ ಹಾಗೂ ದಿಲ್ಲಿ ಮೂಲದ ಆಂಜನೇಯ ಹನುಮಂತಯ್ಯ ಹಾಗೂ ಎನ್. ರಾಜೇಂದ್ರನ್ ವಿರುದ್ಧ ಕೂಡ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.