ಶಶಿ ತರೂರ್ ಮುಖಕ್ಕೆ ಮಸಿ ಬಳಿಯುವವರಿಗೆ ಬಹುಮಾನ ಘೋಷಿಸಿದ ಮುಸ್ಲಿಂ ಯುವಕ!
ಶಶಿ ತರೂರ್ ಮುಖಕ್ಕೆ ಮಸಿ ಬಳಿಯುವವರಿಗೆ ಬಹುಮಾನ ಘೋಷಿಸಿದ ಮುಸ್ಲಿಂ ಯುವಕ!
019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುನರಾವರ್ತನೆಯಾದರೆ ಭಾರತ, ಹಿಂದೂ ಪಾಕಿಸ್ತಾನ ಆಗಲಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ ಅಲಿಘಡ ಮುಸ್ಲಿಂ ಯುವ ಮಂಡಳಿ ಅಧ್ಯಕ್ಷ ಮೊಹಮ್ಮದ್ ಆಮೀರ್ ರಶೀದ್, ತರೂರ್ ಅವರ ಮುಖಕ್ಕೆ ಮಸಿ ಬಳಿಯುವವರಿಗೆ ₹ 11 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
‘ಕಾಂಗ್ರೆಸ್ ನಾಯಕತ್ವದ ಬೆಂಬಲದೊಂದಿಗೆ ಹೊರಬಂದಿರುವ ಈ ಬೇಜವಾಬ್ದಾರಿ ಹೇಳಿಕೆಗೆ ಹಿಂದೂಗಳು ಮಾತ್ರವಲ್ಲ ದೇಶಭಕ್ತ ಮುಸ್ಲಿಮರಿಗೂ ನೋವಾಗಿದೆ. ಶ್ರೇಷ್ಠ ದೇಶದಲ್ಲಿ ಸಾಮರಸ್ಯದಿಂದ ಬದುಕುತ್ತಿರುವ ಹಿಂದೂ-ಮುಸ್ಲಿಮರನ್ನು ಒಡೆಯಲು ಪ್ರಯತ್ನಿಸಲಾಗುತ್ತಿದೆ’ ಎಂದು ರಶೀದ್ ಹೇಳಿದ್ದಾರೆ.
‘ಬಿಜೆಪಿ ಆಡಳಿತದಲ್ಲಿ ಭಾರತ ಅಭಿವೃದ್ಧಿ ಸಾಧಿಸುವುದನ್ನು ನೋಡಲು ಸಿದ್ಧವಿಲ್ಲದ ಕಾಂಗ್ರೆಸ್ಸಿನವರು ಅಧಿಕಾರ ಹಿಡಿಯುವುದಕ್ಕಾಗಿ ಎಂತಹದೇ ಹಾದಿ ತುಳಿಯಲು ಸಿದ್ಧವಾಗಿದ್ದಾರೆ’ ಎಂದು ಆರೋಪಿಸಿರುವ ಅವರು ಆರ್ಎಸ್ಎಸ್ ಸ್ವಯಂ ಸೇವಕನೂ ಹೌದು.
ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬುಧವಾರ ಮಾತನಾಡಿದ್ದ ತರೂರ್, ಹಿಂದೂ ಪಾಕಿಸ್ತಾನ ಹೇಳಿಕೆ ನೀಡಿದ್ದರು. ಪ್ರಜಾಸತ್ತಾತ್ಮಕ ಸಂವಿಧಾನವನ್ನು ಬದಲಿಸಿ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗುವಂತಹ ಹೊಸ ಸಂವಿಧಾನ ಬರೆಯಲಾಗುವುದು ಎಂಬರ್ಥದಲ್ಲಿ ಮಾತನಾಡಿದ್ದರು.ಈ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದರು.