ಪ್ರಧಾನ ಮೋದಿ ರವರ ಒಂದು ದೇಶ ಒಂದು ಚುನಾವಣೆ ಪರಿಕಲ್ಪನೆಗೆ ಬಿ ಎಸ್ ವೈ ಬೆಂಬಲ

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಪ್ರಧಾನ ಮಂತ್ರಿ ರವರು ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳು ಏಕಕಾಲಕ್ಕೆ ನಡೆಸಬೇಕು ಎಂದು ಆಲೋಚಿಸುತ್ತಿದ್ದಾರೆ. ಈ ವಿಷಯಕ್ಕೆ ಪ್ರತಿಕ್ರಿಯಿಸಿರುವ ಸನ್ಮಾನ್ಯ ಶ್ರೀಯುತ ಯಡಿಯೂರಪ್ಪನವರು ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸಬೇಕು ಎಂಬುದು ಒಂದು ಉತ್ತಮ ವಿಚಾರ ಮತ್ತು ಒಂದು ಉತ್ತಮ ಪರಿಕಲ್ಪನೆ ಆದರೆ ಜಾರಿಗೆ ತರುವುದು ಸ್ವಲ್ಪ ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆಯನ್ನು ಎಲ್ಲಾ ರಾಜ್ಯಗಳು ಒಪ್ಪಿಕೊಳ್ಳಬೇಕು ಎಂದಿದ್ದಾರೆ.

ಮುಂದಿನ ವರ್ಷವೇ ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವುದು ಕಷ್ಟ. ಆದರೆ ನಂತರದ ಚುನಾವಣೆಯಲ್ಲಿ ಜಾರಿಗೆ ತರಬಹುದು ಎಂದರು.

ಇದೇ ವೇಳೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಒಂದು ತಿಂಗಳಲ್ಲಿ ರೈತರ ಕೈಗೆ ಸಾಲ ಮುಕ್ತ ಪತ್ರ ಸಿಗಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ನಾನು ಅದಕ್ಕಾಗಿ ಕಾಯುತ್ತಿಲ್ಲ.ಆದರೆ ರಾಷ್ಟ್ರಕೃತ ಮತ್ತು ಸಹಕಾರಿ ಬ್ಯಾಂಕ್ ಗಳಿಗೆ ಸಾಲ ಹೇಗೆ ಮರುಪಾವತಿ ಮಾಡುತ್ತಾರೆ ಎಂಬುದನ್ನು ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು ಎಂದರು.

bjpbsyKarnataka BJPmodiNarendra modi
Comments (0)
Add Comment