ಅಜಾತಶತ್ರು ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಅಜಾತಶತ್ರು ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

0

ಅಜಾತಶತ್ರು ಎಂದೆ ಖ್ಯಾತರಾಗಿರುವ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕಳೆದ ಕೆಲವು ದಿನಗಳಿಂದ ಭಾರಿ ಅನಾರೋಗ್ಯದಿಂದ ಬಳಲುತ್ತಿದ್ದ  ವಾಜಪೇಯಿ ರವರನ್ನು ನಿನ್ನೆ ತಡರಾತ್ರಿ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ವಾಜಪೇಯಿ ರವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಗೃಹ ಸಚಿವರಾದ ರಾಜನಾಥ್ ಸಿಂಗ್ ಅವರು ರಾಜನಾಥ್ ಸಿಂಗ್ ಅವರು ವಾಜಪೇಯಿರವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಇನ್ನು ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬಿಜೆಪಿ ಪಕ್ಷದ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ರವರು ಆಸ್ಪತ್ರೆಗೆ ಭೇಟಿ ನೀಡಲಿದ್ದು  ವಾಜಪೇಯಿರವರ ಆರೋಗ್ಯವನ್ನು ವಿಚಾರಿಸಲಿ ದ್ದಾರೆ ಎಂಬುದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ವಾಜಪೇಯಿ ರವರು ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು ಆದರೆ ಮತ್ತೊಮ್ಮೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಉಂಟಾಗಿರುವುದು ವಿಷಾದಕರ ಸಂಗತಿ.

ಅಜಾತಶತ್ರು ಗಳಾದ ಅಟಲ್ ಬಿಹಾರಿ ವಾಜಪೇಯಿ ರವರು ಬಹುಬೇಗನೆ ಗುಣಮುಖರಾಗಲಿ ಎಂದು ಆಶಿಸುತ್ತೇವೆ.