ಬಿಜೆಪಿ ಪಕ್ಷದ ಮೇಲೆ ಗೂಬೆ ಕೂರಿಸುವವರ ವಿರುದ್ಧ ಶೋಭಾ ಗರಂ

ಬಿಜೆಪಿ ಪಕ್ಷದ ಮೇಲೆ ಗೂಬೆ ಕೂರಿಸುವವರ ವಿರುದ್ಧ ಶೋಭಾ ಗರಂ

0

ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ರವರು ಮೈತ್ರಿ ಸರ್ಕಾರ ವನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಬಿಜೆಪಿ ಪಕ್ಷವು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳಿಗೆ ಉತ್ತರಿಸಿದರು. ಇದೇ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಡಿಕೆ ಶಿವಕುಮಾರ್ ಅವರಿಗೆ ಬಹಿರಂಗ ಸವಾಲು ಹಾಕಿದರು.

ಮೈತ್ರಿ ಸರ್ಕಾರ ಉರುಳುವ ಆತಂಕ ವಿದ್ದರೆ ಅದಕ್ಕೆ ನಾವು ಕಾರಣರಲ್ಲ ಬದಲಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ನಡೆಯುತ್ತಿರುವ ಒಳ ಜಗಳವೇ ಕಾರಣ ಎಂದು ವ್ಯಂಗ್ಯವಾಡಿದರು.

ಇದೇ ಸಮಯದಲ್ಲಿ ಮಾತನಾಡಿದ ಕರಂದ್ಲಾಜೆ ರವರು ನಾವು ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುವುದಿಲ್ಲ, ಆದರೆ ಡಿಕೆ ಶಿವಕುಮಾರ್ ಅವರಿಗೆ ತಾಕತ್ತು ಇದ್ದರೆ ಕಾಂಗ್ರೆಸ್ ಪಕ್ಷದಿಂದ ವಲಸೆ ಬರುವ  ಅತೃಪ್ತರನ್ನು  ತಡೆಯಿರಿ ಎಂದು ಸವಾಲು ಹಾಕಿದರು.

ಇನ್ನು ಡಿಕೆಶಿ ದವರ ಬಂಧನದ ವಿಷಯವಾಗಿ ಮಾತನಾಡಿದ ಕರಂದ್ಲಾಜೆ ರವರು ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಯಾರನ್ನು ಬೇಕಾದರೂ ಭೇಟಿಯಾಗಲಿ ನಮಗೆ ಯಾವುದೇ ಅಭ್ಯಂತರವಿಲ್ಲ. ತಪ್ಪು ಮಾಡಿದರೆ ಶಿಕ್ಷೆಯಾಗುತ್ತದೆ ಎಂದು ಡಿ ಕೆ ಶಿವಕುಮಾರ್ ಅವರ ವಿರುದ್ಧ ಗರಂ ಆದರು.