ಬಳ್ಳಾರಿ: ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹಾಗೂ ಹೊಸಪೇಟೆ ಶಾಸಕ ಆನಂದ ಸಿಂಗ್ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಬುಧವಾರ ಜಾಮೀನುರಹಿತ ವಾರಂಟ್ ಜಾರಿಯಾಗಿದೆ.
[do_widget id=et_ads-2]
50 ಸಾವಿರ ಮೆಟ್ರಿಕ್ ಟನ್ ಅದಿರು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಗೇಂದ್ರ ಹಾಗೂ ಆನಂದಸಿಂಗ್ ಮೇಲೆ ಲೋಕಾಯುಕ್ತ ವಿಶೇಷ ತನಿಖಾ ದಳ ಪ್ರಕರಣ ದಾಖಲಿಸಿತ್ತು. ವಿಚಾರಣೆ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಈ ಇಬ್ಬರು ಶಾಸಕರಿಗೆ ಜಾಮೀನುರಹಿತ ವಾರಂಟ್ ಜಾರಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಮಾಹಿತಿ ಕೊರತೆಯಿಂದ ಅದು ಸಾಧ್ಯವಾಗಿರಲಿಲ್ಲ. ಸಹಜವಾಗಿಯೇ ವಾರಂಟ್ ಜಾರಿಯಾಗಿದೆ. ಆಗಿರುವ ಪ್ರಮಾದವನ್ನು ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಶಾಸಕ ನಾಗೇಂದ್ರ ಪ್ರತಿಕ್ರಿಯಿಸಿದ್ದಾರೆ.
[do_widget id=et_ads-3]
ಸಚಿವ ಸ್ಥಾನಕ್ಕೆ ಕುತ್ತು:
ಅಕ್ರಮ ಅದಿರು ಸಾಗಣೆ ಹಾಗೂ ಬೇಲೆಕೇರಿ ಪ್ರಕರಣದಲ್ಲಿ ಈ ಇಬ್ಬರು ಶಾಸಕರು ವಿಚಾರಣೆ ಎದುರಿಸುತ್ತಿದ್ದಾರೆ. ಹೀಗಾಗಿ ಆಗಾಗ್ಗೆ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ. ಇಬ್ಬರೂ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು, ಈ ಸಂಬಂಧ ಹೈಕಮಾಂಡ್ ಮೇಲೆ ಒತ್ತಡವನ್ನೂ ಹಾಕುತ್ತಿದ್ದಾರೆ.
Creadits: Suvarna News
[do_widget id=et_ads-4]