ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಡಿದೆದ್ದ ಜಾರಕಿಹೊಳಿ

ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಡಿದೆದ್ದ ಜಾರಕಿಹೊಳಿ

0

ರಾಜ್ಯದ ಬಳ್ಳಾರಿ ಕ್ಷೇತ್ರದ ಲೋಕಸಭಾ ಉಪ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಭಾರಿ ಭಿನ್ನಮತ ಸ್ಪೋಟಗೊಂಡಿದ್ದು ನಿಮಗೆಲ್ಲರಿಗೂ ತಿಳಿದಿರುವ ವಿಷಯ. ಆದರೆ ರಮೇಶ್ ಜಾರಕಿಹೊಳಿ ರವರು ಡಿಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

[do_widget id=et_ads-2]

ಕಾಂಗ್ರೆಸ್ ಪಕ್ಷದಲ್ಲಿ ಡಿಕೆ ಶಿವಕುಮಾರ್ ಅವರಿಗೆ ತಮ್ಮದೇ ಆದ ಸ್ಥಾನಮಾನವಿದೆ. ಹಲವಾರು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕ ಎನಿಸಿಕೊಂಡಿರುವ ಡಿಕೆ ಶಿವಕುಮಾರ್ ಅವರ ವಿರುದ್ಧ ಇದ್ದಕ್ಕಿದ್ದ ಹಾಗೆ ರಮೇಶ್ ಜಾರಕಿಹೊಳಿ ಕೋಪ ಗೊಂಡಿರುವುದು ಎಲ್ಲರ ನಿದ್ದೆಗೆಡಿಸಿದೆ.

[do_widget id=et_ads-3]

ಹೌದು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸಚಿವ ಡಿಕೆ ಶಿವಕುಮಾರ್ ಅವರ ಜೊತೆ ಪ್ರಚಾರಕ್ಕೆ ಹೋಗುವುದಿಲ್ಲ. ಪಕ್ಷಕ್ಕಾಗಿ ದುಡಿಯುವ ಪ್ರತಿಯೊಬ್ಬ ಕಾರ್ಯಕರ್ತನೂ ಅತ್ಯಂತ ಮುಖ್ಯ ಹೀಗಾಗಿ ನಾಯಕರು ಆದೋರು ಕೇವಲ ಎದೆ ಉಬ್ಬಿಸಿಕೊಂಡು ಓಡಾಡುವುದಲ್ಲ ಎಂದು ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.

[do_widget id=et_ads-4]

ಈ ಹೇಳಿಕೆಯಿಂದ ಮೈತ್ರಿ ಸರ್ಕಾರದಲ್ಲಿ ಆತಂಕ ಉಂಟಾಗಿದ್ದು ಒಂದು ವೇಳೆ ಡಿಕೆ ಶಿವಕುಮಾರ್ ಅವರು ಸಹ ಇದಕ್ಕೆ ಪ್ರತ್ಯುತ್ತರ ನೀಡಿದರೆ ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ ಭುಗಿಲೆದ್ದು ಮುಂದೇನು ಕಾದಿದೆಯೋ ಎಂದು ಎಲ್ಲರೂ ಚಿಂತೆಗೀಡಾಗಿದ್ದಾರೆ.

[do_widget id=et_ads-5]