ಕರ್ನಾಟಕ ರಾಜ್ಯದ ಯುವ ಸಂಸದ ಪ್ರತಾಪ್ ಸಿಂಹರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಳೆದ ಬಾರಿ ಅಧಿಕಾರದಲ್ಲಿದ್ದಾಗ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳನ್ನು ಸಮರ್ಪಕವಾಗಿ ಕರ್ನಾಟಕಕ್ಕೆ ತಲುಪಿಸಿದ್ದಾರೆ. ಇದೇ ಕಾರಣಕ್ಕಾಗಿ ಮತ್ತೊಮ್ಮೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಪ್ರತಾಪ್ ಸಿಂಹರವರು ಈಗಾಗಲೇ ಮತ್ತೊಮ್ಮೆ ಅಧಿಕಾರ ವಹಿಸಿಕೊಂಡ ಬಳಿಕ ಹಲವಾರು ಬಾರಿ ವಿವಿಧ ಅಭಿವೃದ್ಧಿಯ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಜನರ ಮನಗೆಲ್ಲುವ ಹಾದಿಯಲ್ಲಿ ಮುಂದೆ ಸಾಗುತ್ತಿದ್ದಾರೆ. ಅದೇ ರೀತಿ ಇದೀಗ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ನೀಡಿರುವ ಪ್ರತಾಪ್ ಸಿಂಹರವರು ಇನ್ನು ಒಂದು ವಾರದಲ್ಲಿ ಮತ್ತೊಂದು ಗುಡ್ ನ್ಯೂಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಸಂಪೂರ್ಣ ಮಾಹಿತಿಗಾಗಿ ಕೆಳಗಡೆ ಓದಿ.
ಇಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪ್ರತಾಪ್ ಸಿಂಹ ಈ ವಿಚಾರವನ್ನು ಬಹಿರಂಗಪಡಿಸಿದ್ದು, ಇನ್ನು ಮುಂದೆ ಬೆಂಗಳೂರು ಹಾಗೂ ಮೈಸೂರಿನ ನಡುವೆ ಮೇನ್ ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ಎಂಬ ಹೆಸರಿನ ರೈಲು ಸಂಜೆ 5: 20ಕ್ಕೆ ಹೊರಟು ರಾತ್ರಿ 8 ಗಂಟೆಗೆ ಮೈಸೂರು ತಲುಪಲಿದ್ದು, ಮತ್ತೊಮ್ಮೆ ಎಂಟು ಮೂವತ್ತಕ್ಕೆ ಮೈಸೂರಿನಲ್ಲಿ ಹೊರಟು 11ಕ್ಕೆ ಮರಳಿ ಬೆಂಗಳೂರು ತಲುಪಲಿದೆ. ಅದು ಕೇವಲ ಮೂವತ್ತು ರೂಪಾಯಿಗಳಲ್ಲಿ ಎಂಬ ವಿಷಯವನ್ನು ಬಹಿರಂಗಪಡಿಸಿದ್ದಾರೆ. ನಿತ್ಯ ಸಾವಿರಾರು ಜನ ಓಡಾಡುವ ಈ ಎರಡು ನಗರಗಳ ಮಧ್ಯೆ ಹೊಸ ರೈಲು ಅದು ಕಡಿಮೆ ದರಕ್ಕೆ ಸಿಗುವ ಕಾರಣ ಸಾವಿರಾರು ಜನರು ಲಾಭವನ್ನು ಪಡೆದುಕೊಳ್ಳಲಿದ್ದಾರೆ. ಇಷ್ಟೇ ಅಲ್ಲದೆ ಇನ್ನೂ ಒಂದು ಘೋಷಣೆ ಬಾಕಿ ಇದೆ, ಅದನ್ನು ಮುಂದಿನ ವಾರ ಘೋಷಣೆ ಮಾಡುತ್ತೇನೆ ಎಂದು ಪೋಸ್ಟ್ ಮಾಡುವ ಮೂಲಕ ಎಲ್ಲರನ್ನೂ ಕಾಯುವಂತೆ ಮಾಡಿದ್ದಾರೆ.