ನಡುಗುತ್ತಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದ ಸುಬ್ರಮಣಿಯನ್ ಸ್ವಾಮಿ ! ಭಾರತೀಯರಿಗೆ ಭರ್ಜರಿ ಗುಡ್ ನ್ಯೂಸ್

ನಡುಗುತ್ತಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದ ಸುಬ್ರಮಣಿಯನ್ ಸ್ವಾಮಿ ! ಭಾರತೀಯರಿಗೆ ಭರ್ಜರಿ ಗುಡ್ ನ್ಯೂಸ್

ಇಂದು ಬಹುತೇಕ ಭಾರತೀಯರು ಜಮ್ಮು ಹಾಗೂ ಕಾಶ್ಮೀರ ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿರುವ ಕಾರಣ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ ಇನ್ನು ಕೆಲವರು ಕೇಂದ್ರ ಸರ್ಕಾರದ ವಿರುದ್ಧ ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದೇ ರೀತಿ ಒಂದೆಡೆ ಭಾರತದಲ್ಲಿ ಸಂಭ್ರಮ ಹೆಚ್ಚಾಗಿದ್ದರೆ ಮತ್ತೊಂದೆಡೆ ಪಾಕಿಸ್ತಾನದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿರುವುದು ನಿಮಗೆಲ್ಲರಿಗೂ ತಿಳಿದಿರುವ ವಿಷಯ. ಇಷ್ಟು ದಿವಸ ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನ ಮಾನವು ಯಾರಿಗೆ ಸಹಾಯವಾಗುತ್ತಿತ್ತೋ ಇಲ್ಲವೋ ತಿಳಿದಿಲ್ಲ ಆದರೆ ಪಾಕಿಸ್ತಾನಕ್ಕೆ ಹಾಗೂ ದೇಶದ್ರೋಹಿಗಳಿಗೆ ಖಂಡಿತ ಸಹಾಯವಾಗುತ್ತಿತ್ತು. ಅಮಿತ್ ಶಾ ರವರು ಗೃಹ ಮಂತ್ರಿಯಾದ ಮೇಲೆ ಬಹಳ ಅಳೆದು-ತೂಗಿ ಸಂಪೂರ್ಣ ಭದ್ರತಾ ವ್ಯವಸ್ಥೆಯನ್ನು ಮಾಡಿಕೊಂಡು ಇದೀಗ ಜಮ್ಮು-ಕಾಶ್ಮೀರಕ್ಕೆ ಅಂಟಿದ್ದ ಪಿಡುಗನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದಾರೆ.

ಇಂತಹ ಸಮಯದಲ್ಲಿ ಮೊದಲೇ ಆತಂಕದಲ್ಲಿದ್ದ ಪಾಕಿಸ್ತಾನಕ್ಕೆ ಸುಬ್ರಮಣಿಯನ್ ಸ್ವಾಮಿ ರವರು ಕೇಂದ್ರ ಸರ್ಕಾರದ ಮುಂದಿನ ಗುರಿ ಬಹಿರಂಗಪಡಿಸುವ ಮೂಲಕ ಅಕ್ಷರಸಹ ನಡುಗಿ ಹೋಗಿದ್ದ ಪಾಕಿಸ್ತಾನಕ್ಕೆ ಮತ್ತಷ್ಟು ಭಯ ತುಂಬಿದ್ದಾರೆ. ವಿಶೇಷ ಸ್ನಾನಮಾನ ರದ್ದಾದ ಬೆನ್ನಲ್ಲೇ ಕೇಂದ್ರ ಸರ್ಕಾರದ ಮುಂದಿನ ನಡೆ ಪಾಕ್ ಆಕ್ರಮಿತ ಕಾಶ್ಮೀರ ವನ್ನು ತನ್ನ ವಶಕ್ಕೆ ಪಡೆಯುವುದು ಕೇಂದ್ರ ಸರ್ಕಾರದ ಮುಂದಿನ ಅಜೆಂಡಾ ಆಗಲಿದೆ” ಎಂದು ಸ್ವಾಮಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಅಮೇರಿಕಾದ ದೇಶದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಅಗತ್ಯವಿಲ್ಲ, ಪಾಕಿಸ್ತಾನದ ಪ್ರಧಾನಿಯಾಗಿರುವ ಇಮ್ರಾನ್ ಖಾನ್ ಅವರು ಅಕ್ರಮವಾಗಿ ವಶಪಡಿಸಿಕೊಂಡಿರುವ ಭಾರತದ ಭಾಗವನ್ನು ಹಿಂದಕ್ಕೆ ನೀಡುವುದಷ್ಟೇ ಈಗ ಇರುವ ಅವರ ಮುಂದಿನ ಆಯ್ಕೆ” ಎಂದು ಸ್ವಾಮಿ ಹೇಳಿದ್ದಾರೆ. ಈ ಮೂಲಕ ಭಾರತೀಯರಿಗೆ ಮತ್ತಷ್ಟು ಸಿಹಿ ಸುದ್ದಿ ನೀಡಲು ಮೋದಿ ಸರ್ಕಾರ ಮುಂದಾಗಲಿದೆ ಎಂಬ ಗುಟ್ಟನ್ನು ಸಹ ಬಿಟ್ಟುಕೊಟ್ಟಿದ್ದಾರೆ.