ಸಿದ್ದುಗೆ ಖಡಕ್ ಸಂದೇಶ ರವಾನೆ ಮಾಡಿದ ಸೋನಿಯಾ ! ಪಾಲಿಸದೇ ಇದ್ದಲ್ಲಿ ತಲೆದಂಡ ಖಚಿತ

ಸಿದ್ದುಗೆ ಖಡಕ್ ಸಂದೇಶ ರವಾನೆ ಮಾಡಿದ ಸೋನಿಯಾ ! ಪಾಲಿಸದೇ ಇದ್ದಲ್ಲಿ ತಲೆದಂಡ ಖಚಿತ

ನಿಮಗೆಲ್ಲರಿಗೂ ತಿಳಿದಿರುವ ಹಾಗೇ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಗಳಾಗಿರುವ ಸಿದ್ದರಾಮಯ್ಯ ರವರು ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಆದ ವರ್ಚಸ್ಸನ್ನು ಮೂಡಿಸಿಕೊಂಡು ಯಾವುದೇ ಎದುರಾಳಿ ಗಳಿಲ್ಲದೆ ಮುನ್ನುಗ್ಗುತ್ತಿದ್ದರು. ಆದರೆ ಇತ್ತೀಚಿಗೆ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ನಾಯಕರು ಬಂಡಾಯವೆದ್ದು ಸಿದ್ದರಾಮಯ್ಯ ರವರ ವಿರುದ್ಧ ಆಕ್ರೋಶದ ಮಾತುಗಳನ್ನು ಹೊರಹಾಕಿದ್ದರು. ಇದೇ ಕಾರಣಕ್ಕಾಗಿ ಪ್ರತಿಪಕ್ಷ ನಾಯಕನ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ತಾನೇ ಎಲ್ಲಾ ಎಂದು ಮೆರೆಯುತ್ತಿದ್ದ ಸಿದ್ದರಾಮಯ್ಯ ರವರು ಬಲ ಪ್ರದರ್ಶನ ನಡೆಸಿ ಹಲವಾರು ಶಾಸಕರನ್ನು ಒಟ್ಟಿಗೆ ಸೇರಿಸಿಕೊಂಡು ಹೈಕಮಾಂಡ್ ಜೊತೆ ಲಾಬಿ ನಡೆಸುವಂತಹ ಪರಿಸ್ಥಿತಿ ಎದುರಾಗಿತ್ತು. ಮೊದಮೊದಲು ಸಿದ್ದರಾಮಯ್ಯ ರವರಿಗೆ ಪ್ರತಿಪಕ್ಷ ಸ್ಥಾನ ನೀಡಬಾರದು ಎಂದು ನಿರ್ಣಯ ಮಾಡಿದ್ದ ಸೋನಿಯಾಗಾಂಧಿ ರವರು ಕೊನೆಗೆ ಸಿದ್ದರಾಮಯ್ಯರವರ ಬಲ ಪ್ರದರ್ಶನದ ನಂತರ ಬೇರೆ ದಾರಿಯಿಲ್ಲದೆ ಪ್ರತಿಪಕ್ಷ ನಾಯಕನಾಗಿ ಆಯ್ಕೆ ಮಾಡಿದ್ದರು.

ಇಷ್ಟಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಜಗಳ ನಿಂತು ಹೋಯಿತು ಎಂದು ಕೊಂಡರೆ, ಈ ಎಲ್ಲಾ ವಿದ್ಯಮಾನ ಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಸೋನಿಯಾ ಗಾಂಧಿ ರವರು ಇದೀಗ ಸಿದ್ದರಾಮಯ್ಯ ಅವರಿಗೆ ಖಡಕ್ ಸಂದೇಶವನ್ನು ರವಾನೆ ಮಾಡಿದ್ದಾರೆ. ಎಲ್ಲಾ ಕಾಂಗ್ರೆಸ್ ಪಕ್ಷದ ನಾಯಕರನ್ನು ತಮ್ಮ ವಿಶ್ವಾಸಕ್ಕೆ ತೆಗೆದುಕೊಂಡು ಈ ಕೂಡಲೇ ಕರ್ನಾಟಕ ರಾಜ್ಯದಲ್ಲಿ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ನಡೆಯುವ ಉಪ ಚುನಾವಣೆಗೆ ಭರ್ಜರಿ ತಯಾರಿಯನ್ನು ನಡೆಸಬೇಕು. ಒಟ್ಟು ಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲಿ ಕನಿಷ್ಠ ಹತ್ತು ಕ್ಷೇತ್ರಗಳಲ್ಲಿ ಗೆಲುವನ್ನು ದಾಖಲಿಸಿ ಬಿಜೆಪಿ ಸರ್ಕಾರ ರಚನೆ ಮಾಡದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಒಂದು ವೇಳೆ ವಿಫಲವಾದಲ್ಲಿ ತಮ್ಮ ಬಳಿ ಇರುವ ಸ್ಥಾನಗಳಿಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.