ಮಂಗಳೂರಿನಲ್ಲಿ ಇತ್ತೀಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯು ಅಶಾಂತಿಯ ಹಾದಿಯಲ್ಲಿ ತೆರಳಿದಾಗ, ನಡೆಯುವ ಅವಘಡಗಳನ್ನು ತಡೆಯಲು ಪೊಲೀಸರು ಗೋಲಿಬಾರ್ ನಡೆಸಿದ್ದರು. ಇದರ ಕುರಿತು ಪರ-ವಿರೋಧದ ಹೇಳಿಕೆಗಳು ಸಾಕಷ್ಟು ಕೇಳಿಬಂದಿದ್ದವು.
ಇದೇ ಕಾರಣದಿಂದ ಪೊಲೀಸರು ಪರಿಸ್ಥಿತಿ ಯಾವ ರೀತಿ ನಮ್ಮ ಕೈತಪ್ಪಿ ಹೋಗಿತ್ತು ಎಂಬುದನ್ನು ತೋರಿಸಲು ಹಲವಾರು ಮನೆಗಳ ಸಿಸಿಟಿವಿ ಹಾಗೂ ಮೊಬೈಲ್ಗಳಲ್ಲಿ ಸೆರೆ ಹಿಡಿದ ದೃಶ್ಯಗಳನ್ನು ತಮಗೆ ಕಳಿಸುವಂತೆ ಮನವಿ ಮಾಡಿದ ಬಳಿಕ ಸಾಮಾನ್ಯ ಜನರೇ ಕಳುಹಿಸಿರುವ ವಿಡಿಯೋಗಳನ್ನು ಇಂದು ಬಿಡುಗಡೆ ಮಾಡಿದ್ದಾರೆ. ಬಿಡುಗಡೆ ಮಾಡಿದ ತಕ್ಷಣ ಕುಮಾರಸ್ವಾಮಿರವರ ಪ್ರಶ್ನೆಗಳ ಸುರಿಮಳೆ ಯನ್ನು ಸುರಿಸಿದ್ದಾರೆ. ಆದರೆ ಈ ಪ್ರಶ್ನೆಗಳನ್ನು ಕೇಳಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜನರು ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಮ್ಮೆ ಸಂಪೂರ್ಣ ಪ್ರಶ್ನೆಗಳನ್ನು ಓದಿ, ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ನಲ್ಲಿ ತಿಳಿಸಿ.ಮೊದಲನೆಯದಾಗಿ ಈ ವಿಡಿಯೋ ಮಾನಗಳೂರಿನದ್ದೇ ಎಂಬುದಕ್ಕೆ ಸಾಕ್ಷಿಯೇನು ಎಂದು ಪ್ರಶ್ನೆ ಮಾಡಿದ್ದಾರೆ.ತದನಂತರ ಈ ಕೆಳಗಿನ ಟ್ವೀಟ್ ಗಳನ್ನೂ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಲಕ್ಷ ಜನ ಸೇರಿದರೂ ಶಾಂತಿಯುತವಾಗಿ ನಡೆದ ಪ್ರತಿಭಟನೆ ಮಂಗಳೂರಿನಲ್ಲಿ ವಿಕೋಪಕ್ಕೆ ಹೋಗಲು ಕಾರಣವೇನು?
(1/4)— H D Kumaraswamy (@hd_kumaraswamy) December 24, 2019
ಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ?
ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ರಾಜ್ಯಸರ್ಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು?
(2/4)— H D Kumaraswamy (@hd_kumaraswamy) December 24, 2019
ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರ್ಕಾರ ಅದಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ?
ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ?
(3/4)— H D Kumaraswamy (@hd_kumaraswamy) December 24, 2019
ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತ ಇಲ್ಲ. ಆದರೆ ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರ್ಕಾರ ಪೊಲೀಸರೇ ಪಿತೂರಿ ನಡೆಸಿದರೆ ಸುಮ್ಮನೆ ಕೂರಲಾಗುವುದಿಲ್ಲ. ಇದಕ್ಕೆ ಸಂಬಂಧಿಸಿದವರು ಉತ್ತರ ಕೊಡುವರೇ?
(4/4)— H D Kumaraswamy (@hd_kumaraswamy) December 24, 2019