ಸಚಿವರಾದ ಕೆಲವೇ ದಿನಗಳಲ್ಲಿಯೇ ಭರ್ಜರಿ ಗುಡ್ ನ್ಯೂಸ್ ನೀಡಿದ ರಮೇಶ್ ಜಾರಕಿಹೊಳಿ ! ಏನು ಗೊತ್ತಾ?

ಸಚಿವರಾದ ಕೆಲವೇ ದಿನಗಳಲ್ಲಿಯೇ ಭರ್ಜರಿ ಗುಡ್ ನ್ಯೂಸ್ ನೀಡಿದ ರಮೇಶ್ ಜಾರಕಿಹೊಳಿ ! ಏನು ಗೊತ್ತಾ?

ನಮಸ್ಕಾರ ಸ್ನೇಹಿತರೇ, ಇದೀಗ ಗೋಕಾಕ್ ಕ್ಷೇತ್ರದ ಶಾಸಕ ಹಾಗೂ ಜಲಸಂಪನ್ಮೂಲ ಸಚಿವರಾಗಿರುವ ರಮೇಶ್ ಜಾರಕಿಹೊಳಿ ರವರು ಸಚಿವರಾಗಿ ಬಡ್ತಿ ಪಡೆದ ಕೆಲವೇ ದಿನಗಳಲ್ಲಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಇವರ ಈ ಘೋಷಣೆಗೆ ಕಾರ್ಯಕರ್ತರು ಫುಲ್ ಕುಶ್ ಆಗಿ ಏನು ಮಾಡುತ್ತಿದ್ದಾರೆ ಗೊತ್ತಾ? ತಿಳಿಯಲು ಒಮ್ಮೆ ಓದಿ.

ಹೌದು ಇದೀಗ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಘೋಷಣೆ ಮಾಡಿರುವ ರಮೇಶ್ ಜಾರಕಿಹೊಳಿ ರವರು, ಬಿಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರವು ಇಡೀ ರಾಜ್ಯದಲ್ಲಿ ಬರೋಬ್ಬರಿ ಹನ್ನೆರಡು ಸಾವಿರ ಹೆಕ್ಟೇರ್ ಪ್ರದೇಶಕ್ಕೆ ವಿವಿಧ ನೀರಾವರಿ ಯೋಜನೆಗಳ ಮೂಲಕ ನೀರು ಹರಿಸುವ ಯೋಜನೆ ಸಿದ್ಧಪಡಿಸಿ ಕೊಂಡಿದೆ, ಇದರ ಕುರಿತು ರಾಜ್ಯಪಾಲರೇ ಮಾತನಾಡಿದ್ದಾರೆ ಎಂದು ಹೆಮ್ಮೆಯಿಂದ ಘೋಷಣೆ ಮಾಡಿದ್ದಾರೆ. ಮಲಪ್ರಭಾ ನದಿಯ ಕಾಲುವೆಗಳನ್ನು ಆಧುನೀಕರಣಗೊಳಿಸಿ ರೈತರಿಗೆ ಮತ್ತಷ್ಟು ನೆರವಾಗುವಂತಹ ಯೋಜನೆಗಾಗಿ ಸಾವಿರ ಕೋಟಿ ಯೋಜನೆ ಸಿದ್ಧಪಡಿಸಲಾಗಿದ್ದು, ವಿಜಯನಗರದ ಕಾಲುವೆಗಳಿಗೆ 450 ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಹೇಮಾವತಿ ನಾಲಿಗೆ 475 ಕೋಟಿ ಸೇರಿದಂತೆ ಇಡೀ ರಾಜ್ಯದಲ್ಲಿ 21 ಮಧ್ಯಮ ಗಾತ್ರದ ಹಾಗೂ ಬೃಹತ್ ಗಾತ್ರದ ನೀರಾವರಿ ಯೋಜನೆಗಳಿಗಾಗಿ 4000ಕ್ಕೂ ಹೆಚ್ಚು ಕೋಟಿಗಳನ್ನು ಮೀಸಲಿಡಲಾಗಿದೆ ಎಂದು ಸಂಪೂರ್ಣ ವಿವರಣೆ ನೀಡಿದ್ದಾರೆ. ಈ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡಿದ್ದಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಸರ್ಕಾರವನ್ನು ಉರುಳಿಸುವ ಲ್ಲಿ ಪ್ರಮುಖ ಪಾತ್ರವಹಿಸಿದ್ದ ರಮೇಶ್ ಜಾರಕಿಹೊಳಿ ಅವರು ಕೇವಲ ಅಧಿಕಾರಕ್ಕಾಗಿ ಪಕ್ಷ ತೊರೆದಿದ್ದಾರೆ ಎಂಬ ಆರೋಪಗಳ ನಡುವೆ ರಮೇಶ್ ಜಾರಕಿಹೊಳಿ ರವರು ಸಚಿವರಾದ ಕೆಲವೇ ದಿನಗಳಲ್ಲಿ ಗುಡ್ ನ್ಯೂಸ್ ನೀಡಿರುವುದನ್ನು ಕಂಡ ಬಿಜೆಪಿ ಬೆಂಬಲಿಗರು ಹಾಗೂ ರಮೇಶ್ ಜಾರಕಿಹೊಳಿ ರವರ ಕಟ್ಟಾ ಅಭಿಮಾನಿಗಳು ಅಭಿವೃದ್ಧಿಯೇ ರಮೇಶ್ ಜಾರಕಿಹೊಳಿ ರವರ ಮೂಲ ಉದ್ದೇಶ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟರ್ಗಳನ್ನು ಭಾರಿ ಸಂಖ್ಯೆಯಲ್ಲಿ ಹರಿದು ಬಿಟ್ಟಿದ್ದಾರೆ.