ಚಿರಂಜೀವಿ ಸಿನಿಮಾದಲ್ಲಿ ಕನ್ನಡ ಖ್ಯಾತ ನಟ ವಿಲ್ಲನ್, ಯಾರು ಗೊತ್ತಾ?? ಮತ್ತೊಬ್ಬ ನಟ ಟಾಲಿವುಡ್ ಗೆ.

ಚಿರಂಜೀವಿ ಸಿನಿಮಾದಲ್ಲಿ ಕನ್ನಡ ಖ್ಯಾತ ನಟ ವಿಲ್ಲನ್, ಯಾರು ಗೊತ್ತಾ?? ಮತ್ತೊಬ್ಬ ನಟ ಟಾಲಿವುಡ್ ಗೆ.

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಇದೀಗ ತೆಲುಗು ಚಿತ್ರರಂಗದ ಖ್ಯಾತ ನಟ ಚಿರಂಜೀವಿ ರವರ ನಟನೆಯ ಬಹುನಿರೀಕ್ಷೆಯ ಆಚಾರ್ಯ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಕಳೆದ ವರ್ಷದ ಡಿಸೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗಿದ್ದು, ಚಿತ್ರೀಕರಣದ ಸೆಟ್ ಗಳ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿದೆ. ಇನ್ನು ಇದೇ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ರವರ ಏಕೈಕ ಪುತ್ರ ಮತ್ತು ತೆಲುಗು ಚಿತ್ರರಂಗದ ಮತ್ತೊಬ್ಬ ಸ್ಟಾರ್ ನಟ ರಾಮ್ ಚರಣ್ ರವರು ಕೂಡ ಪ್ರಮುಖ ಪಾತ್ರದಲ್ಲಿ ನಟನೆ ಮಾಡುತ್ತಿದ್ದು, ಇತ್ತೀಚೆಗಷ್ಟೇ ರಾಮಚರಣ್ ರವರ ಫಸ್ಟ್ ಲುಕ್ ರಿಲೀಸ್ ಆಗಿದೆ.

ಹೀಗೆ ದಿನೇ ದಿನೇ ಚಿತ್ರದ ಕುರಿತು ಹೊಸ ರೀತಿಯ ಅಪ್ಡೇಟ್ ಗಳನ್ನು ಬಿಡುಗಡೆ ಮಾಡುತ್ತಿರುವ ಚಿತ್ರತಂಡ ಪ್ರತಿಯೊಂದು ಅಪ್ಡೇಟ್ ನಲ್ಲಿಯೂ ಕೂಡ ಆಚಾರ್ಯ ಸಿನಿಮಾದ ನಿರೀಕ್ಷೆಯನ್ನು ಹೆಚ್ಚಿಸುತ್ತಿದೆ. ಇದೀಗ ಚಿರಂಜೀವಿ ರವರು ನಟನೆ ಮಾಡುತ್ತಿರುವ ಆಚಾರ್ಯ ಸಿನಿಮಾದ ವಿಲನ್ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಕನ್ನಡ ಚಿತ್ರರಂಗದಲ್ಲಿ ವಿಲನ್ ಆಗಿ ಕೆಲವು ಸಿನಿಮಾಗಳಲ್ಲಿ ನಟನೆ ಮಾಡಿದ್ದರೂ ಕೂಡ ಉತ್ತಮ ನಟನೆಯ ಮೂಲಕ ಉತ್ತಮ ಹೆಸರು ಗಳಿಸಿರುವ ನಟ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಹೌದು ಸ್ನೇಹಿತರೇ ಅವರು ಮತ್ಯಾರು ಅಲ್ಲ ಸ್ಯಾಂಡಲ್ವುಡ್ ಚಿತ್ರರಂಗದಲ್ಲಿ ಭಜರಂಗಿ ಲೋಕಿ ಎಂದು ಖ್ಯಾತಿಯನ್ನು ಪಡೆದುಕೊಂಡಿರುವ ಸೌರವ್ ಲೋಕೇಶ್ ಅವರು ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ, ಅಧಿಕೃತ ಮಾಹಿತಿಯನ್ನು ಚಿತ್ರದ ತಂಡ ಇನ್ನೂ ಬಹಿರಂಗಪಡಿಸಿಲ್ಲ ವಾದರೂ ಈಗಾಗಲೇ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡು ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ ಎಂಬ ಮಾಹಿತಿ ಕೇಳಿದೆ. ಇದೇ ಮೊಟ್ಟಮೊದಲ ಬಾರಿಗೆ ಸೌರವ್ ರವರು ತೆಲುಗು ಚಿತ್ರರಂಗದ ಸ್ಟಾರ್ ನಟರಾಗಿರುವ ಚಿರಂಜೀವಿ ಹಾಗೂ ರಾಮಚರಣ್ ರವರ ಜೊತೆ ಸಿನಿಮಾ ಮಾಡುತ್ತಿದ್ದು, ಖಳ ನಟನಾಗಿ ಮಿಂಚಲು ಸಿದ್ಧವಾಗಿದ್ದಾರೆ. ಇನ್ನು ಈ ಸಿನಿಮಾದಲ್ಲಿ ನಟಿಯಾಗಿ ಕಾಜಲ್ ಅಗರ್ವಾಲ್ ರವರು ಕಾಣಿಸಿಕೊಳ್ಳುತ್ತಿದ್ದು ಚಿತ್ರದ ಮೇಲಿನ ನಿರೀಕ್ಷೆಗಳು ದಿನೇ ದಿನೇ ಹೆಚ್ಚಾಗುತ್ತಿದೆ.