ಇಷ್ಟು ದಿವಸ ಎಲ್ಲಿಯೂ ಕಾಣಿಸಿಕೊಳ್ಳದ ಕಿರಿಕ್ ಹುಡುಗಿ ಸಂಯುಕ್ತ ಇದ್ದಕ್ಕಿದ್ದ ಹಾಗೆ ಕನ್ನಡ ಚಿತ್ರರಂಗದ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ್ದು ಯಾಕೆ ಗೊತ್ತೇ??

ಇಷ್ಟು ದಿವಸ ಎಲ್ಲಿಯೂ ಕಾಣಿಸಿಕೊಳ್ಳದ ಕಿರಿಕ್ ಹುಡುಗಿ ಸಂಯುಕ್ತ ಇದ್ದಕ್ಕಿದ್ದ ಹಾಗೆ ಕನ್ನಡ ಚಿತ್ರರಂಗದ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ್ದು ಯಾಕೆ ಗೊತ್ತೇ??

ನಮಸ್ಕಾರ ಸ್ನೇಹಿತರೇ ಒಂದು ಸಮಯದಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಕಿರಿಕ್ ಪಾರ್ಟಿ ಚಿತ್ರ ಕನ್ನಡ ಚಿತ್ರರಂಗದಲ್ಲಿ ಬಹಳಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಈ ಸಂದರ್ಭದಲ್ಲಿ ಕನ್ನಡಚಿತ್ರರಂಗದಲ್ಲಿ ಕೇವಲ ರಶ್ಮಿಕ ಮಂದಣ್ಣ ಮಾತ್ರವಲ್ಲದೆ ಸಂಯುಕ್ತ ಹೆಗಡೆ ಕೂಡ ಸಾಕಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದ್ದರು. ಆದರೆ ಅದಾದ ನಂತರ ಎಲ್ಲೂ ಕೂಡ ಅವರು ಕಾಣಿಸಿಕೊಂಡಿರಲಿಲ್ಲ.

ಇತ್ತೀಚಿಗಷ್ಟೇ ನಂದಕಿಶೋರ್ ನಿರ್ದೇಶನದ ರಾಣ ಚಿತ್ರದ ಪ್ರೆಸ್ ಮೀಟ್ ನಡೆದಿದ್ದು ಇದರಲ್ಲಿ ಸಂಯುಕ್ತ ಹೆಗಡೆ ಕೂಡ ಭಾಗಿಯಾಗಿದ್ದರು. ರಾಣ ಚಿತ್ರದಲ್ಲಿ ಸಂಯುಕ್ತ ಹೆಗಡೆ ಒಂದು ಸ್ಪೆಷಲ್ ಸಾಂಗ್ ನಲ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದವರು ಸಂಯುಕ್ತ ರವರಿಗೆ ಯಾಕೆ ನೀವು ಕನ್ನಡ ಚಿತ್ರರಂಗದ ಮಟ್ಟಿಗೆ ಸೆಲೆಕ್ಟಿವ್ ಆಗಿದ್ದೀರಿ ಯಾಕೆ ಜಾಸ್ತಿಯಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬುದಾಗಿ ಪ್ರಶ್ನೆಯನ್ನು ಕೇಳಿದ್ದಾರೆ

ಈ ಸಂದರ್ಭದಲ್ಲಿ ಸಂಯುಕ್ತ ರವರು ನಗುತ್ತಲೇ ಈ ಪ್ರಶ್ನೆಯನ್ನು ನಮ್ಮ ಚಿತ್ರರಂಗದ ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಕೇಳಿ ಎಂಬುದನ್ನು ಹೇಳುತ್ತ ಅಸಮಾಧಾನವನ್ನು ಹೊರಹಾಕಿದ್ದಾರೆ. ಸದ್ಯಕ್ಕೆ ನಾನು ಓದ್ತಾ ಇದೀನಿ ತಂದೆ-ತಾಯಿಗಳ ಆರೋಗ್ಯ ಸರಿಯಿಲ್ಲ. ಈಗಾಗಲೇ ನಾನು ನಟಿಸಿರುವ ಮೂರು ತಮಿಳು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ ಎಂಬುದಾಗಿ ಹೇಳಿದ್ದಾರೆ. ಇನ್ನು ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕ ಹಾಗೂ ನಿರ್ದೇಶಕರು ಪರಭಾಷೆಯ ನಟಿಯರಿಗೆ ಮಣೆ ಹಾಕುತ್ತಿದ್ದಾರೆ ಇದರಿಂದಾಗಿ ನಮಗೆ ಕನ್ನಡ ಚಿತ್ರರಂಗದಲ್ಲಿ ಅವಕಾಶಗಳು ಸಿಗುತ್ತಿಲ್ಲ ಎಂಬುದಾಗಿ ಹೇಳಿದ್ದಾರೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಬಾಕ್ಸ್ ಅಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.