ನಮಸ್ಕಾರ ಸ್ನೇಹಿತರೇ ಕನ್ನಡದ ಬಾಕ್ಸ್ ಆಫೀಸ್ ಸುಲ್ತಾನ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಹೊಸ ಸಿನಿಮಾ ಕ್ರಾಂತಿ ಸೆಟ್ಟೇರಿರುವುದು ನಿಮಗೆ ತಿಳಿದಿರುವ ವಿಷಯವಾಗಿದೆ. ಯಜಮಾನ ಸಿನಿಮಾ ಖ್ಯಾತಿಯ ಹರಿಕೃಷ್ಣ ಹಾಗೂ ಬಿ.ಸುರೇಶ್ ರವರ ಸಾರಥ್ಯದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈ ಸಿನಿಮಾಕ್ಕೆ ನಾಯಕಿ ನಟಿಯಾಗಿ ರಚಿತಾ ರಾಮ್ ಇದ್ದಾರೆ. ಈ ಚಿತ್ರಕ್ಕಾಗಿ ನಟ ದರ್ಶನ್ ವಿಶೇಷ ಗೆಟಪ್ ನಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.
ಈಗ ಈ ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಿದ್ದಿದೆ. ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಯೂಟ್ಯೂಬ್ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಕ್ರಾಂತಿ ಸಿನಿಮಾ ಬಗ್ಗೆ ಮಹತ್ತರವಾದ ಒಂದು ವಿಷಯ ಹೊರಹಾಕಿದ್ದಾರೆ. ಹೌದು ಈ ಸಿನಿಮಾದಲ್ಲಿ ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ದರ್ಶನ್ ರವರ ಅಜ್ಜನ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ.
ಇನ್ನು ಹಿರಿಯ ನಟಿ ಉಮಾಶ್ರೀರವರು ದರ್ಶನ್ ರವರ ಅಜ್ಜಿಯ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ. ಹಾಗೆಯೇ ಕನ್ನಡದ ಹಿರಿಯ ನಟ ವಿ.ರವಿಚಂದ್ರನ್ ಸಹ ಈ ಸಿನಿಮಾದಲ್ಲಿ ನಟಿಸುತ್ತಿದ್ದು, ಅವರು ದರ್ಶನ್ ರವರ ತಂದೆಯ ಪಾತ್ರವನ್ನು ನಿರ್ವಹಿಸುತ್ತಾರಂತೆ. ಈ ವಿಷಯವನ್ನ ಸ್ವತಃ ಮುಖ್ಯಮಂತ್ರಿ ಚಂದ್ರು ಬಹಿರಂಗಪಡಿಸಿದ್ದಾರೆ. ಒಟ್ಟಿನಲ್ಲಿ ಎರಡು ವರ್ಷಗಳ ನಂತರ ದರ್ಶನ್ ಮುಖಕ್ಕೆ ಬಣ್ಣ ಹಚ್ಚಿದ್ದು, ಡಿ -ಬಾಸ್ ರವರ ಹೊಸ ಸಿನಿಮಾ ಸಾಕಷ್ಟು ಕ್ರೇಜ್ ಹುಟ್ಟಿಸಿದೆ. ಈ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಮೆಂಟ್ ಮೂಲಕ ತಿಳಿಸಿ.